ನೆನಪು

ಮುಸ್ಸಂಜೆಯಲ್ಲಿ ಕರಿ-ಮೋಡಗಳು
ಕವಿದಾಗ ಕಾಡುವುದು ನಿನ್ನ ನೆನಪು

ಗುಡುಗು-ಸಿಡಿಲು-ಮಿಂಚು ಬರಿತ ಮಳೆ
ಬಂದಾಗ ಬರುವುದು ನಿನ್ನ ನೆನಪು

ಧಾರಾಕಾರವಾಗಿ ಸುರಿಯುವ ಮಳೆಯಲ್ಲಿ
ತೊಯ್ದು ನಡುಗುವ ಚಳಿಯಲ್ಲಿ ನಿನ್ನ ನೆನಪು

ಅಂದು ತೆಗೆದುಕೂಂಡು ಹೋದ ನನ್ನ ಛತ್ರಿ
ಹಿಂದಿರುಗಿಸಿಲ್ಲಾ ನಿನಗಿಲ್ಲವೇ ಗೆಳತಿ ನೆನಪು ?



ಹುಡುಗಿ ಬೇಕಾಗಿದ್ದಾಳೆ

ಹುಡುಗಿ
ಬೇಕಾಗಿದ್ದಾಳೆ
ಇರಬೇಕು ತುಂಬಾ
ಸಿಂಪಲ್ !

ನಕ್ಕರೆ
ಗಲ್ಲದ ಮೇಲೆ
ಬೀಳಬೇಕು
ಡಿಂಪಲ್ !

ಅವಳ
ತಲೆಯಲ್ಲಿ ಇರಬೇಕು
ಪುಟ್ಟ ಪ್ರೊಸೆಸರ್
ಇಂಟೆಲ್ !

ಅವಳ
ರೂಪ-ಲಾವಣ್ಯ ಕಂಡು
ಬಾಯಿಬಿಡಬೇಕು
ಪಕ್ಕದ್ಮನೆ ಅಂಕಲ್ !

ಅವಳು
ಸ್ನಾನಕ್ಕೆ ಹಚ್ಚಬೇಕು
ದಿನಾ ಸೋಪು
ಸಿಂಥಾಲ್ !

ಅವಳ
ಅಂದ ಹೊಗಳುತ್ತಾ
ಕವಿಯಾಗಬೇಕು
ಮೆಂಟಲ್ !

ಎತ್ತರದಲ್ಲಿ
ಅವಳಾಗಿರಬೇಕು
ರಾಜಸ್ತಾನದ
ಕ್ಯಾಮೆಲ್ !

ಅವಳ
ಗಲ್ಲ ನೋಡಿ ನೆನಪಾಗಬೇಕು
ಕಾಶ್ಮೀರದ ಸಿಹಿ
ಆಪಲ್ !

ಅವಳು
ಬೀದಿಯಲ್ಲಿ ನಡೆದರೆ
ಕಾಮೇಂಟ್ರಿ ಹೇಳಬೇಕು
ಇಯಾನ್ ಚಾಪೆಲ್ !

ಮುಖದ ಮೇಲೆ
ಇರಲಿ ಒಂದೇ
ಒಂದು ಹರೆಯದ
ಪಿಂಪಲ್ !

ನಮ್ಮ ಪ್ರೀತಿಯೆಂಬ
ಧರ್ಮಕ್ಕೆ ಅವಳಾಗಬೇಕು
ಗೀತಾ-ಕುರಾನ್
ಬೈಬಲ್ !


ಅವಳು ಪ್ರೀತಿ
ಮೆಚ್ಚಿ ನಾ ಕಟ್ಟಬೇಕು
ಇನ್ನೊಂದು
ತಾಜ್ಮಹಲ್ !

ಎಲ್ಲದಕ್ಕೂ ಮೊದಲ
ಅವಶ್ಯಕತೆ
ಅವಳಾಗಿರಬೇಕು
ಸಿಂಗಲ್ !

ಇವಳೇನಾದರು
ನಿಮಗೆ ಸಿಕ್ಕರೆ
ನನ್ನ ಅಡ್ರೆಸ್‌ಗೆ ಮಾಡಿ
ಈ-ಮೇಲ್ !!

-ಮಲ್ಲಿಕಾರ್ಜುನ ಸಣ್ಣಪ್ಪನವರ sannams@hotmail।com

ಮೂರು ಮತ್ತೊಂದು

ಹೆಂಡತಿ ಮಾಡಿದ ಉಂಡಿ

ತಿಂದು ಕರಗಿಸ
ಬಲ್ಲೆ ಕಲ್ಲಿನ ಬಂಡಿ !
ತಿನ್ನಲಾರೆ ಹೆಂಡತಿ
ಮಾಡಿದ ನುಚ್ಚಿನ ಉಂಡಿ !!

ಮಹಾಕವಿ ಕುವೆಂಪು

ನನ್ನ ಹೆಂಡತಿಯ ಮುಖದ
ಬಣ್ಣ ಇದ್ದಿದ್ದರೆ ಕೆಂಪು !
ನಾನು ಕೂಡ ಆಗುತ್ತಿದ್ದೆ
ಮಹಾಕವಿ ಕುವೆಂಪು !!


ನನ್ನ ಐಶ್ವರ್ಯಾ ರೈ

ನಲ್ಲೆ,
ನಿನ್ನ ರೂಪ-ಲಾವಣ್ಯ
ಹೇಗಿದ್ದರೂ ಸೈ !
ನನ್ನ ಪಾಲಿಗೆ
ನೀನೆ ಐಶ್ವರ್ಯಾ ರೈ !!

ಗಾಂಧಿವಾದ

ಗಂಟಲಲ್ಲಿ ಇಳಿದಾಗ
ಮೂರು ತೊಟ್ಟು ಬ್ರಾಂದಿ
ಮತ್ತಿನಲ್ಲಿ ನಾನಾಗುವೆ
ಮಹಾತ್ಮ ಗಾಂಧಿ

3 comments:

ಮಲ್ಲಿ ಸಣ್ಣಪ್ಪನವರ್'.......... said...

Waahh re wahaaaa.....

Sushrutha Dodderi said...

ಪ್ರಿಯ ಮಲ್ಲಿ,
ನಮಸ್ಕಾರ. ಹೇಗಿದ್ದೀರಿ?

ನಾವೆಲ್ಲ ಎಷ್ಟೋ ಕಾಲದಿಂದ ಅಂತರ್ಜಾಲದಲ್ಲಿ ಬರೀತಿದೀವಿ, ಓದ್ತಿದೀವಿ, ಪ್ರತಿಕ್ರಿಯಿಸಿಕೊಳ್ತಿದೀವಿ, ಮೇಲ್-ಸ್ಕ್ರಾಪ್-ಚಾಟ್ ಮಾಡ್ಕೊಳ್ತಿದೀವಿ.. ಆದ್ರೆ ನಮ್ಮಲ್ಲಿ ಬಹಳಷ್ಟು ಜನ ಪರಸ್ಪರ ಪರಿಚಯ ಮಾಡಿಕೊಂಡಿಲ್ಲ, ಮುಖತಃ ಭೇಟಿ ಆಗಿಲ್ಲ. ಇರಾದೆ ಇದ್ರೂ ಅದು ಸಾಧ್ಯ ಆಗಿಲ್ಲ!

ಇಂತಿದ್ದಾಗ, ನವ ಪ್ರಕಾಶನ ಸಂಸ್ಥೆ 'ಪ್ರಣತಿ', ಅಂತರ್ಜಾಲದಲ್ಲಿ ಕನ್ನಡ ಬಳಸುವ ಮತ್ತು ಓದುವ ಎಲ್ಲರನ್ನು ಒಂದೆಡೆ ಸೇರಿಸುವ ಈ ಕಾರ್ಯಕ್ಕೆ ಮುಂದಾಗಿದೆ. ನಾಡಿದ್ದು ಭಾನುವಾರ ನಾವೆಲ್ಲ ಪರಸ್ಪರ ಭೇಟಿಯಾಗುವ ಅವಕಾಶ ಒದಗಿ ಬಂದಿದೆ.

ಡೇಟು: ೧೬ ಮಾರ್ಚ್ ೨೦೦೮
ಟೈಮು: ಇಳಿಸಂಜೆ ನಾಲ್ಕು
ಪ್ಲೇಸು: ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌, ಬಸವನಗುಡಿ, ಬೆಂಗಳೂರು

ಆವತ್ತು ನಮ್ಮೊಂದಿಗೆ, ಕನ್ನಡದ ಮೊದಲ ಅಂತರ್ಜಾಲ ತಾಣದ ರೂವಾರಿ ಡಾ| ಯು.ಬಿ. ಪವನಜ, 'ದಟ್ಸ್ ಕನ್ನಡ'ದ ಸಂಪಾದಕ ಎಸ್.ಕೆ. ಶ್ಯಾಮಸುಂದರ್, 'ಸಂಪದ'ದ ಹರಿಪ್ರಸಾದ್ ನಾಡಿಗ್, 'ಕೆಂಡಸಂಪಿಗೆ'ಯ ಅಬ್ದುಲ್ ರಶೀದ್ ಸಹ ಇರ್ತಾರೆ, ಮಾತಾಡ್ತಾರೆ.

ಎಲ್ಲರೊಂದಿಗೆ ಒಂದು ಸಂಜೆ ಕಳೆಯುವ ಖುಶಿಗೆ ನೀವೂ ಪಾಲುದಾರರಾಗಿ ಅಂತ, 'ಪ್ರಣತಿ'ಯ ಪರವಾಗಿ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ. ಈ ಕಾರ್ಯಕ್ರಮದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಿ. ಅವರನ್ನೂ ಕರೆದುಕೊಂಡು ಬನ್ನಿ.

ಅಲ್ಲಿ ಸಿಗೋಣ,
ಇಂತಿ,

ಸುಶ್ರುತ ದೊಡ್ಡೇರಿ

Raghavendra said...

hudugi bekaagiddale... sooper aagide...
jodi pada tumba chennagi anukaranisi bardidira...
nimma blog nodi tumba khushi aitu... keep writing